ಗಡಿಭಾಗದ ಸರ್ಕಾರಿ ಕನ್ನಡ ಶಾಲೆಗಳ ಅಭಿವೃದ್ಧಿಗೆ ಸರ್ಕಾರ ಬದ್ಧ: ಸುವರ್ಣ ಸೌಧದ ಬಳಿ ಪ್ರತಿಭಟನಾಕಾರರ ಅಹವಾಲು ಸ್ವೀಕರಿಸಿದ ಸಚಿವರು
ಬೆಳಗಾವಿ, ಡಿಸೆಂಬರ್ — (F7 News):
ಬೆಳಗಾವಿಯ ಸುವರ್ಣ ಸೌಧದ ಬಳಿ ‘ಕರುನಾಡ ರಕ್ಷಣಾ ವೇದಿಕೆ’ ಕಾರ್ಯಕರ್ತರು ನಡೆಸುತ್ತಿದ್ದ ಪ್ರತಿಭಟನಾ ಧರಣಿ ಸ್ಥಳಕ್ಕೆ ಭೇಟಿ ನೀಡಿದ ಸಚಿವರು, ಪ್ರತಿಭಟನಾಕಾರರ ಅಹವಾಲನ್ನು ಸ್ವೀಕರಿಸಿ ಸರ್ಕಾರದ ನಿಲುವನ್ನು ಸ್ಪಷ್ಟಪಡಿಸಿದರು.
ಗಡಿಭಾಗದ ಸರ್ಕಾರಿ ಕನ್ನಡ ಶಾಲೆಗಳ ಅಭಿವೃದ್ಧಿ ಕ.ರ.ವೇ ಪ್ರಮುಖ ಬೇಡಿಕೆಗಳಲ್ಲಿ ಒಂದಾಗಿದ್ದು, ಈ ಶಾಲೆಗಳ ಮಕ್ಕಳಿಗೆ ಯಾವುದೇ ಕೊರತೆಯಾಗದಂತೆ ಹೊಸ ಕಾನೂನು ಜಾರಿಗೆ ತರಲಾಗಿದೆ ಎಂದು ಸಚಿವರು ತಿಳಿಸಿದರು. ಗಡಿಭಾಗದ ಕನ್ನಡ ಶಾಲೆಗಳ ಬಲವರ್ಧನೆಗೆ ಸರ್ಕಾರ ಸಂಪೂರ್ಣ ಬದ್ಧವಾಗಿದೆ ಎಂದು ಅವರು ಭರವಸೆ ನೀಡಿದರು.
ಇದೇ ವೇಳೆ, ಕನ್ನಡ ನಾಡ ವಿರೋಧಿ ಚಟುವಟಿಕೆಯಲ್ಲಿ ತೊಡಗಿರುವ ಮಹಾರಾಷ್ಟ್ರ ಏಕೀಕರಣ ಸಮಿತಿಯನ್ನು (ಎಂ.ಇ.ಎಸ್) ನಿಷೇಧಿಸಬೇಕು ಎಂಬ ಸಂಘಟನೆಗಳ ಒತ್ತಾಯವನ್ನು ಗಮನಕ್ಕೆ ತೆಗೆದುಕೊಂಡು, ಅಗತ್ಯ ಕ್ರಮ ಕೈಗೊಳ್ಳುವುದಾಗಿ ಸಚಿವರು ತಿಳಿಸಿದರು.
ಸುವರ್ಣ ವಿಧಾನಸೌಧವನ್ನು ನೈಸರ್ಗಿಕ ಆಡಳಿತ ಶಕ್ತಿ ಕೇಂದ್ರವಾಗಿಸಲು ಕಾರ್ಯದರ್ಶಿ ಮಟ್ಟದ ಕಚೇರಿಗಳನ್ನು ಸ್ಥಳಾಂತರಿಸುವ ಬೇಡಿಕೆಗೂ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ ಎಂದು ಅವರು ತಿಳಿಸಿದರು.
ಪ್ರತಿಭಟನೆ ವೇಳೆ ಕರುನಾಡು ರಕ್ಷಣಾ ವೇದಿಕೆ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.
DP Aravind F7News.in Shimoga

